ಇನ್ನೊಂದು ಅಕ್ಷರಂಗಳ

"ಹರಿವ ಲಹರಿ"ಯ ಹಾದಿ->->->

ಹೀಗೊಂದು ಯೋಚನೆ:

*ಪರಿಪೂರ್ಣತೆಯೆಂದರೆ ಮುಕ್ತಾಯ; ಹಾದಿಯ ಕೊನೆ.*

Sunday 30 November, 2008

ಆತ್ಮ ಚಿಂತನ-೧೨

ಓದುಗರೇ, ನಮಸ್ಕಾರ.
ಹಲವಾರು ವಾರಗಳ ಬಳಿಕ ನಿಮ್ಮನ್ನು ಎದುರುಗೊಳ್ಳುತ್ತಿದ್ದೇನೆ. ಮೌನಕ್ಕೆ ಕಾರಣಗಳು ಬೇಕಿಲ್ಲ, ಬಿಡಿ.

ಒಂದು ಸ್ವಾರಸ್ಯಕರ ಚರ್ಚೆ ಇತ್ತೀಚೆಗೆ ಬಹಳ ತಿಳಿದವರ ಜೊತೆ ನಡೆಯಿತು. ಅಂದು ಅವರೊಡನೆ ಎತ್ತಿದ ಪ್ರಶ್ನೆಯನ್ನು ಇಲ್ಲಿ ನಿಮ್ಮೆದುರಿಗೂ ಇಡುತ್ತಿದ್ದೇನೆ- ನಿಮ್ಮ ಅಭಿಪ್ರಾಯ ತಿಳಿಯುವ, ನಿಮ್ಮನ್ನು ಯೋಚನೆಗೆ ಹಚ್ಚುವ ಹುಚ್ಚು ಕುತೂಹಲದಿಂದ; ಅಷ್ಟೇ.

ಪ್ರಶ್ನೆ ಹೀಗಿದೆ:
"ಮಧ್ವಾಚಾರ್ಯರ ದ್ವೈತ ಸಿದ್ಧಾಂತ (ಪರಮಾತ್ಮ ಮತ್ತು ಜೀವಾತ್ಮರು ಬೇರೆ ಬೇರೆ... ಇವೆರಡೂ ಒಂದೇ ಅಲ್ಲ)
ಶಂಕರಾಚಾರ್ಯರ ಅದ್ವೈತ ಸಿದ್ಧಾಂತ (ಪರಮಾತ್ಮ ಮತ್ತು ಜೀವಾತ್ಮರು ಒಂದೇ... ಮೂಲ ಒಂದೇ ರೂಪ)
- ಇವೆರಡರಲ್ಲಿ ನಿಮಗೆ ಯಾವುದು ಇಷ್ಟ? ಯಾಕೆ?"

ನನ್ನ ಚರ್ಚೆ ನಡೆದದ್ದು ಕಟ್ಟಾ ದ್ವೈತಿಯೊಡನೆ. ಅದರ ಸಾರಾಂಶ ಮತ್ತು ನನ್ನ ವೈಯಕ್ತಿಕ ಅಭಿಪ್ರಾಯಗಳನ್ನು ಇಲ್ಲಿ ಮುಂದಿನ ಕಂತಿನಲ್ಲಿ ಖಂಡಿತವಾಗಿಯೂ ಕೊಡುತ್ತೇನೆ. ಈಗ ನಿಮ್ಮ ಸರದಿ. ಪತ್ರಗಳಿಗಾಗಿ ಕಾಯುತ್ತಿದ್ದೇನೆ....